ಭಾರತದ ರಾಷ್ಟ್ರೀಯ ಚಿಹ್ನೆಗಳು

ಭಾರತದ ರಾಷ್ಟ್ರೀಯ ಚಿಹ್ನೆಗಳು

1. ‎ರಾಷ್ಟ್ರಧ್ವಜ‬ : 

ಭಾರತದ ರಾಷ್ತ್ರೀಯ ಧ್ವಜ’ದ ಈಗಿನ ಅವತರಣಿಕೆಯನ್ನು ಜುಲೈ 22, 1947ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ. ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ :
ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
ಬಿಳಿಬಣ್ಣ :-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
ಹಸಿರು ಬಣ್ಣ;– ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣ ಮನವನ್ನು ಹಾಡಲೇಬೇಕು.
ಅಶೋಕ ಚಕ್ರ : ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ. ಇದು ನಿಲಿ ಬಣ್ಣದಿಂದ ಕೂಡಿದೆ.

> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.
> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

 

3. ರಾಷ್ಟ್ರೀಯ ಹೂವು‬ : 
> ಭಾರತದ ಪುಷ್ಪ – ಕಮಲದ ಹೂವು
> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.
> ಕಮಲದ ವೈಜ್ಞಾನಿಕ ಹೆಸರು – ನೀಲುಂಬಾ ನುಸಿಫೇರಾ(Nelumbo nucifera)
> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.

4. ರಾಷ್ಟ್ರಗೀತೆ‬ : 
> ಭಾರತದ ರಾಷ್ಟ್ರಗೀತೆ ‘ಜನಗಣಮನ”
> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
> ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
> ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
> ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ.
> ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ.
> ರವೀಂದ್ರನಾಥ ಟ್ಯಾಗೋರ್ ರವರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು)
> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ “ರಕ್ಷಾಬಂಧನ” ಆಚರಿಸುವಂತೆ ಕರೆ ನೀಡಿದ್ದರು.

5. ರಾಷ್ಟ್ರೀಯ ಹಾಡು‬ : 
> ಸಂಸ್ಕ್ರತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೇಯನ್ನು ಜನೆವರಿ 24 1950 ರಂದು ಅಳವಡಿಸಿಕೊಂಡಿತು.
> ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ ‘ಆನಂದಮಠ’ ಕಾದಂಬರಿಯಿಂದ ಆಯ್ದುಕ್ಕೊಳ್ಳಲಾಗಿದೆ.
> ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ ಹಾಡಲಾಯಿತು.
> ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು.
> ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಭಾಷಾಂತರಿಸಿದವರು ಶ್ರೀಅರವಿಂದೋ ಘೋಷ್.

6. ರಾಷ್ಟ್ರೀಯ ಪಂಚಾಂಗ‬ : 
> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ.
> ಇದನ್ನು ಮಾರ್ಚ 22, 1957 ರಂದು ಅವಡಿಸಿಕ್ಕೊಳಲಾಗಿದೆ.
> ಸಾಮಾನ್ಯ ವರ್ಷದ ಮೊದಲ ದಿನಾಂಕ – ಮಾರ್ಚ 21
> ಅಧಿಕ ವರ್ಷದ ಮೊದಲ ದಿನಾಂಕ – ಮಾರ್ಚ 22
> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು.
> 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು.
> ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು – ಚೈತ್ರ
> ಕೊನೆಯ ತಿಂಗಳು – ಫಾಲ್ಗುಣ
> ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ

7. ‎ರಾಷ್ಟ್ರೀಯ ಕ್ರೀಡೆ‬ : 
> ಭಾರತದ ರಾಷ್ಟ್ರೀಯ ಕ್ರೀಡೆ – ಹಾಕಿ
> ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
> ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
> ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ.
> ಭಾರತದ ಹಾಕಿಯ ಮಾಂತ್ರಿಕ – ಧ್ಯಾನಚಂದ್
> ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು.
> ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ.
> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ – 70 ನಿಮಿಷಗಳು.

8. ರಾಷ್ಟ್ರೀಯ ನದಿ‬ : 
> ಭಾರತದ ರಾಷ್ಟ್ರೀಯ ನದಿ – ಗಂಗಾನದಿ
> ನವೆಂಬರ್ 04, 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು.
> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ(2510 km)
> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ.

9. ‎ರಾಷ್ಟ್ರೀಯ ಜಲಪ್ರಾಣಿ‬ : 
> ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಫಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ.
> ಡಾಲ್ಫಿನದ ವೈಜ್ಞಾನಿಕ ಹೆಸರು – ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.((Platanista gangetica)

10. ‎ರಾಷ್ಟ್ರೀಯ ಪಕ್ಷಿ‬ : 
> ಭಾರತದ ರಾಷ್ಟ್ರೀಯ ಪಕ್ಷಿ – ನವಿಲು
> ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ – 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು.
> ನವಿಲಿನ ವೈಜ್ಞಾನಿಕ ಹೆಸರು – ಪಾವೋ ಕ್ರಿಸ್ಟಾಟಸ್ (pavo cristatus)
> ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ.
11. ‎ರಾಷ್ಟ್ರೀಯ ಮರ‬ : 
> ಭಾರತದ ರಾಷ್ಟ್ರೀಯ ಮರ – ಬನಯಾನ್ ಅಥವಾ ಅರಳಿ ಮರ.
> ಅರಳಿ ಮರದ ವೈಜ್ಞಾನಿಕ ಹೆಸರು – ಫೈಕಾಸ್ ಬೆಂಗಾಲೆನಿಸ್ (ficus benghalensis)
> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ.
> ಗೌತಮ ಬುದ್ದನ ಆಧ್ಯಾತ್ಮಿಕ ಗುರು – ಅಲಾರ ಕಮಾ
> ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು – ಕಲ್ಕತ್ತದಲ್ಲಿ.
> ಪ್ರಪಂಚದ ಅತಿ ದೊಡ್ಡ ವೃಕ್ಷ – ದೈತ್ಯ ಸಿಕೋಯ್ ಮರ.
> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ ಸಂಖ್ಯೆಯ ಆಧಾರದ ಮೇಲೆ.

12. ರಾಷ್ಟ್ರೀಯ ಹಣ್ಣು‬ : 
> ಭಾರತದ ರಾಷ್ಟ್ರೀಯ ಹಣ್ಣು – ಮಾವಿನ ಹಣ್ಣು
> ಮಾವಿನ ವೈಜ್ಞಾನಿಕ ಹೆಸರು – ಮ್ಯಾಂಜಿಫೇರಾ ಇಂಡಿಕಾ (mangifera indica)
> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು – A,C,D
> ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.

13. ರಾಷ್ಟ್ರೀಯ ವಂಶಪಾರಂಪರ್ಯ ಪ್ರಾಣಿ‬ : 
> ಭಾರತ ಸರ್ಕಾರವು ಅಕ್ಟೋಬರ್ 23, 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ.
> ಆನೆಯ ವೈಜ್ಞಾನಿಕ ಹೆಸರು – ಎಲಿಫಾಸ್ ಮ್ಯಾಕ್ಷಿಮಸ್ (elephas maximus)
> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ – ಆಪ್ರಿಕಾದ ಆನೆ.
> ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ – 1992.
> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ – ಕರ್ನಾಟಕ.
> ಕರ್ನಾಟಕದ ರಾಜ್ಯ ಪ್ರಾಣಿ – ಆನೆ.

14. ‎ರಾಷ್ಟ್ರೀಯ ಪ್ರಾಣಿ‬ : 
> 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು.
> ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
> ಹುಲಿಯ ವೈಜ್ಞಾನಿಕ ಹೆಸರು – ಪ್ಯಾಂಥೇರಾ ಟ್ರೈಗಿಸ್. (Panthera tigris)
> ಭಾರತದ ಮೊದಲ ಹುಲಿ ಅಭಯಾರಣ್ಯ – ಉತ್ತರಖಂಡದ ಕಾರ್ಬೆಟ್
> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ – ಕರ್ನಾಟಕ.
> ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ – ಆಂದ್ರಪ್ರದೇಶದ ನಾಗಾರ್ಜುನ ಸಾಗರ
> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ – ಪಶ್ಚಿಮ ಬಂಗಾಳದ ಸುಂದರಬನ್ಸ್
> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ – 1972

15. ‎ರಾಷ್ಟ್ರೀಯ ಕಟ್ಟಡ‬ : 
> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ.

16. ‎ರಾಷ್ಟ್ರೀಯ ದೊರೆ‬ : ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ.

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey

Post a Comment

2 Comments

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ

    ReplyDelete
  2. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

    ReplyDelete
Emoji
(y)
:)
:(
hihi
:-)
:D
=D
:-d
;(
;-(
@-)
:P
:o
:>)
(o)
:p
(p)
:-s
(m)
8-)
:-t
:-b
b-(
:-#
=p~
x-)
(k)